ಅಭಿಪ್ರಾಯ / ಸಲಹೆಗಳು

ಧ್ಯೇಯೋದ್ದೇಶಗಳು

1977ರ ಅಕಾಡೆಮಿಯ ಚಾರ್ಟರ್ ಪ್ರಕಾರ ಸಾಹಿತ್ಯ ಅಕಾಡೆಮಿಯ ಕೆಲವು ಮುಖ್ಯ ಧ್ಯೇಯೋದ್ದೇಶಗಳು ಈ ರೀತಿ ಇವೆ:

1. ಸಾಹಿತ್ಯ ಕ್ಷೇತ್ರದಲ್ಲಿ ಅಧ್ಯಯನ, ಸಂಶೋಧನೆಗಳಿಗೆ ಪ್ರೋತ್ಸಾಹ ಮತ್ತು ಈ ಉದ್ದೇಶಗಳಿಗಾಗಿ ಸಂಸ್ಥೆಗಳ ಗ್ರಂಥಾಲಯ ಸ್ಥಾಪನೆ.

2. ಸಾಹಿತ್ಯದ ಅಭಿವೃದ್ಧಿ ಹಾಗೂ ಅಂಥ ಉದ್ದೇಶಗಳ ಈಡೇರಿಕೆಯ ದೃಷ್ಟಿಯಿಂದ ಸಮಾನೋದ್ದೇಶ ಹೊಂದಿದ ರಾಜ್ಯದಲ್ಲಿನ ಇತರ ಸಂಘಗಳೊಡನೆ ಸಹಕರಿಸುವುದು.

3. ವಿವಿಧ ಪ್ರದೇಶಗಳ ನಡುವೆ ಸಾಹಿತ್ಯ ವಿಚಾರ ವಿನಿಮಯ ನಡೆಸುವುದು.

4. ದೇಣಿಗೆಗಳ ಮೂಲಕ ತನ್ನ ಕಾರ್ಯೋದ್ದೇಶಗಳಿಗೆ ಹಣವನ್ನು ಸಂಗ್ರಹಿಸುವುದು.

5. ಗ್ರಂಥಗಳ ಸಂಗ್ರಹ ಮತ್ತು ಪ್ರಕಟಣೆ

6. ಪ್ರತಿಭಾವಂತ ಲೇಖಕರಿಗೆ ಮತ್ತು ಶ್ರೇಷ್ಠ ಸಾಹಿತ್ಯ ಕೃತಿಗಳಿಗೆ ಬಹುಮಾನಗಳನ್ನು ಮತ್ತು ಅಂಥ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವುದು.

7. ರಾಜ್ಯದ ವಿವಿಧ ಭಾಗಗಳಲ್ಲಿನ ವೈವಿಧ್ಯಪೂರ್ಣ ಸಾಹಿತ್ಯದ ಸಂಗ್ರಹ, ಸಂರಕ್ಷಣೆ ಮತ್ತು ಅಂಥ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವುದು.

8. ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಅಥವಾ ಕೇಂದ್ರ ಸಾಹಿತ್ಯ ಅಕಾಡೆಮಿಯಾಗಲಿ ಕೇಳಿದಾಗ ಸಲಹೆ ನೀಡುವುದು.

9. ಸಾಹಿತ್ಯೋತ್ಸವಗಳನ್ನು ನಡೆಸುವುದು.

10. ಉನ್ನತ ಶಿಕ್ಷಣಕ್ಕೆ, ಸಂಶೋಧನ ವೇತನಗಳಿಗೆ ಶಿಫಾರಸು ಮಾಡುವುದು.

11. ಅಸಹಾಯಕರಾದ, ವೃದ್ಧರಾದ ಲೇಖಕರಿಗೆ ಅವರು ಸಲ್ಲಿಸಿರುವ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಆರ್ಥಿಕ ಸಹಾಯಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡುವುದು.

12. ತನ್ನ ಧ್ಯೇಯೋದ್ದೇಶಗಳನ್ನು ಸಾಧಿಸಲು ಅಗತ್ಯವಿರುವ ಎಲ್ಲ ಕಾರ್ಯಕ್ರಮಗಳನ್ನು ಕೈಗೊಳ್ಳುವುದು.

ಇತ್ತೀಚಿನ ನವೀಕರಣ​ : 11-09-2020 11:30 AM ಅನುಮೋದಕರು: Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸಾಹಿತ್ಯ ಅಕಾಡೆಮಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080